January 2025
M T W T F S S
 12345
6789101112
13141516171819
20212223242526
2728293031  
May 23, 2026

c24kannada

ವಸ್ತುಸ್ಥಿತಿಯತ್ತ

ಎಕ್ಸೆಲ್‌ ತುಂಡಾಯ್ತು – ಆಟೋ ಪಲ್ಟಿ, ಯುವಕ ಸಾವು

ಬಳ್ಳಾರಿ: ಎಕ್ಸೆಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿಯಾಗಿ ಯುವಕನೋರ್ವ ಮೃತ ಪಟ್ಟರುವ ಘಟನೆ ಕಂಪ್ಲಿಯ (Kampli) ತುಂಗಭದ್ರಾ ಸೇತುವೆ (Tungabhadra Bridge) ಮೇಲೆ ನಡೆದಿದೆ.ಕಂಪ್ಲಿಯ ಎನ್.ಆಸ್ಲಾಂ(24) ಮೃತಪಟ್ಟಿರುವ ಯುವಕ. ಗಂಗಾವತಿಯಿಂದ ಕಂಪ್ಲಿಗೆ ತುಂಗಭದ್ರಾ ನದಿ ಸೇತುವೆ ಮೇಲೆ ಬರುತ್ತಿದ್ದಾಗ ರಿಕ್ಷಾದ ಎಕ್ಸೆಲ್ ತುಂಡಾಗಿದೆ. ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ನೆಲಕ್ಕೆ ವಾಲಿದ್ದರಿಂದ ಪ್ರಯಾಣಿಕರು ಕೆಳಗೆ ಬಿದ್ದು ಗಾಯಗೊಂಡಿದ್ದರು. ಎನ್.ಆಸ್ಲಾಂ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಂಗಾವತಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಆಮೀನಾಬೀ ಎನ್ನುವ ವೃದ್ಧೆಯ ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!