c24kannada

ವಸ್ತುಸ್ಥಿತಿಯತ್ತ

ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ-?, ಅದೊಂಥರ ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ-ಸಚಿವ ಜಮೀರ್ ಅಹಮ್ಮದ್

ವಿಜಯನಗರ : ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು  ಸಚಿವ ಜಮೀರ್ ಅಹಮ್ಮದ್ ರೋಷಾವೇಶದಿಂದ ಮಾತನಾಡಿದರು. ವಿಜಯನಗರ  ಜಿಲ್ಲೆ ಹಂಪಿಯಲ್ಲಿ ಮಾತನಾಡಿದ ಅವರು  ಸಿಎಂ ಸ್ಥಾನ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲಾ,  ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಇದ್ದಾರೆ, ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ, ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ-?, ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತಿವಿ ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲಾ, ಮುಟ್ಟಿದ್ರೆ ಸುಟ್ಟೋಗ್ತಾರೆ, ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ, ಸಿದ್ದರಾಮಯ್ಯನವರು ಸಿಎಂ ಇದ್ದಾರೆ ಕೆಪಿಸಿಸಿ ಅಧ್ಯಕ್ಷ, ಸಿಎಂ ಸಿದ್ದರಾಮಯ್ಯ ಇದ್ದಾರೆ ಅವರೇನಾದ್ರೂ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ, ನಾವು ಅಭಿಪ್ರಾಯ ತಿಳಿಸಬಹುದು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು  ಜಮೀರ್ ಅಹಮ್ಮದ್ ಖಾನ್ ಹೇಳಿದರು.

 

 

ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಅಂತ ಹೇಳಿಲ್ಲಾ, ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರ್ತದೆ, ದಲಿತ, ಅಲ್ಪಸಂಖ್ಯಾತ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ, ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು, ಪರಮೇಶ್ವರ ರಾಜೀನಾಮೆ ವಿಚಾರ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಹೈಕಮಾಂಡ್ ಆದೇಶಕ್ಕೆ ನಾವು ಬದ್ಧ, ಸಿದ್ದರಾಮಯ್ಯ ಟಗರು, ಬೆಂಕಿ ಇದ್ದಂತೆ ಎಂದು  ಜಮ್ಮೀರ್ ಹೇಳಿದರು.

 

Leave a Reply

Your email address will not be published. Required fields are marked *

error: Content is protected !!