ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ..ಭಾರತ ತಂಡದ ಮಾನ ಕಾಪಾಡಿದ ಕನ್ನಡಿಗ KL ರಾಹುಲ್
1 min read
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಿತು. ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದಿದೆ. ಟಾಸ್ ಗೆದ್ದು ಫಸ್ಟ್ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಭಾರತಕ್ಕೆ 265 ರನ್ಗಳ ಸಾಧಾರಣ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ ಇನ್ನೂ 2 ಓವರ್ ಬಾಕಿ ಇರುವಂತೆಯೇ ಗೆದ್ದು ಬೀಗಿದ್ದಾರೆ. ಭಾರತ ತಂಡದ ಗೆಲುವಿನಲ್ಲಿ ಕೆ.ಎಲ್ ರಾಹುಲ್ ಪ್ರಮುಖ ಪಾತ್ರವಹಿಸಿದ್ರು.
ಶುಭ್ಮನ್ ಗಿಲ್ ವಿಕೆಟ್ ಬಿದ್ದ ನಂತರ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಆಸ್ಟ್ರೇಲಿಯಾ ತಂಡದ ಬೌಲರ್ಗಳನ್ನು ಕಾಡಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ತಾನು ಎದುರಿಸಿದ 96 ಬಾಲ್ನಲ್ಲಿ 84 ರನ್ ಚಚ್ಚಿದರು. ಈ ಪೈಕಿ 5 ಬೌಂಡರಿಗಳು ಸೇರಿವೆ. ಕೆ.ಎಲ್ ರಾಹುಲ್ ಇವರಿಗೆ ಸಾಥ್ ನೀಡಿ ಅಬ್ಬರಿಸಿದರು.
ವಿಕೆಟ್ ಬೀಳುತ್ತಿದ್ರೂ ಕೊನೆವರೆಗೂ ಕ್ರೀಸ್ನಲ್ಲೇ ನಿಂತು ಆಡಿದ ಕೆ.ಎಲ್ ರಾಹುಲ್ 2 ಭರ್ಜರಿ ಸಿಕ್ಸರ್, 2 ಫೋರ್ ಸಮೇತ 42 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವನ್ನು ಗೆಲ್ಲಿಸಿದರು. ಬಿರುಸಿನ ಬ್ಯಾಟಿಂಗ್ ಮಾಡಿ ಭಾರತ ತಂಡದ ಮಾನವನ್ನು ಕಾಪಾಡಿದರು.
ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ನಲ್ಲಿ ಸ್ಥಿರ ಪ್ರದರ್ಶನ ನೀಡಿ ಕೆ.ಎಲ್ ರಾಹುಲ್ ಬೆಸ್ಟ್ ಫೀಲ್ಡಿಂಗ್ ಅವಾರ್ಡ್ಗೆ ಭಾಜನರಾದ್ರು. ಇದಾದ ಬಳಿಕ ನಡೆದ 2 ಪಂದ್ಯಗಳಲ್ಲೂ ಕನ್ನಡಿಗ ಕೆ.ಎಲ್ ರಾಹುಲ್ ತಮ್ಮ ಫಾರ್ಮ್ ಕಾಯ್ದುಕೊಳ್ಳುವಲ್ಲಿ ಎಡವಿದರು. ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ್ರು ಎನ್ನುವ ಮಾತುಗಳು ಕೇಳಿ ಬಂದಿದ್ದರುವು. ಹೀಗಾಗಿ ರಾಹುಲ್ಗೆ ಕೊಕ್ ನೀಡಿ ಪಂತ್ಗೆ ಅವಕಾಶ ನೀಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿತ್ತು.
ಕೆಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧ ವಿಕೆಟ್ ಕೀಪರ್ ಆಗಿ ಹಲವು ತಪ್ಪುಗಳನ್ನು ಮಾಡಿದ್ರು. ಇದು ಭಾರತ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆದ್ದರಿಂದ ಸೆಮಿಫೈನಲ್ ಪಂದ್ಯಕ್ಕೆ ಕೆ.ಎಲ್ ರಾಹುಲ್ಗೆ ರೆಸ್ಟ್ ನೀಡಿ ಪಂತ್ ಅವರನ್ನು ಆಡಿಸಲಾಗುವುದು ಎನ್ನಲಾಗಿತ್ತು. ಆದ್ರೂ, ಕೆ.ಎಲ್ ರಾಹುಲ್ ಮೇಲೆ ನಂಬಿಕೆ ಇಟ್ಟು ಮತ್ತೊಂದು ಚಾನ್ಸ್ ನೀಡಲಾಯ್ತು. ಕೆ.ಎಲ್ ರಾಹುಲ್ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡರು.
