c24kannada

ವಸ್ತುಸ್ಥಿತಿಯತ್ತ

ನಿರ್ಮಾಣ ಹಂತದ ಕಟ್ಟಡ ಮೇಲಿಂದ ತಳ್ಳಿ ಪತ್ನಿಯ ಕೊಲೆಗೈದ ಭೂಪ..ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಆನೇಕಲ್: ನಿರ್ಮಾಣ ಹಂತದ ಕಟ್ಟಡ ಮೇಲಿಂದ ಪತ್ನಿಯನ್ನ ದೂಡಿ ಕೊಲೆಗೈದಿರುವ ಘಟನೆ ಆನೇಕಲ್  ತಾಲೂಕಿನ ಸರ್ಜಾಪುರದ ತಿಗಳ ಚೌಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಮಂಜುಳಾ (40) ಹಾಗೂ ಪತಿಯನ್ನು ಮಂಜುನಾಥ್ (45) ಎಂದು ಗುರುತಿಸಲಾಗಿದೆ.ಪತ್ನಿ ಮಾನಸಿಕ ಅಸ್ವಸ್ಥೆಯಾಗಿದ್ದ ಕಾರಣ ಪತಿ ಮಂಜುನಾಥ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಶನಿವಾರ ರಾತ್ರಿ ಹೆಂಡತಿಯನ್ನು ಭುಜದ ಮೇಲೆ ಎತ್ತಿಕೊಂಡು, ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿಂದ ಕೆಳಗೆ ದೂಡಿದ್ದಾನೆ. ಕೆಳಗೆ ಬೀಳುತ್ತಿದ್ದಂತೆ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.ಕೆಳಗೆ ದೂಡಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Leave a Reply

Your email address will not be published. Required fields are marked *

error: Content is protected !!